Friday, March 25, 2011

ನೀನ್ಯಾಕೊ ನಿನ್ನ ಹಂಗ್ಯಾಕೊ

ನೀನ್ಯಾಕೊ ನಿನ್ನ ಹಂಗ್ಯಾಕೊ
ನಿನ್ನ ನಾಮದ ಬಲವೊಂದಿದ್ದರೆ ಸಾಕೊ

ಕರಿ ಮಕರಿಗೆ ಸಿಕ್ಕಿ ಮೊರೆಯಿಡುತಿರುವಾಗ
ಆದಿ ಮೂಲ ಎಂಬೊ ನಾಮವೆ ಕಾಯ್ತೊ

ಬಾಲೆಯ ಸಭೆಯಲ್ಲಿ ಸೀರೆಯ ಸೆಳೆವಾಗ
ಕೃಷ್ಣ ಕೃಷ್ಣ ಎಂಬೊ ನಾಮವೆ ಕಾಯ್ತೊ

ಆ ಮರ ಈ ಮರ ಧ್ಯಾನಿಸುತಿರುವಾಗ
ರಾಮ ರಾಮ ಎಂಬೊ ನಾಮವೆ ಕಾಯ್ತೊ

ನಿನ್ನ ನಾಮಕೆ ಸರಿ ಕಾಣೆನೊ ಜಗದಲಿ
ಘನ್ನ ಮಹಿಮ ಸಿರಿ ಪುರಂದರ ವಿಠ್ಠಲ

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......