Saturday, March 19, 2011

ಅಂಬಿಗ ನಾ ನಿನ್ನ ನಂಬಿದೆ

ಅಂಬಿಗ ನಾ ನಿನ್ನ ನಂಬಿದೆ
ಜಗದಂಬರಮಣನ ನಂಬಿದೆ

ತುಂಬಿದ ಹರಿಗೋಲಂಬಿಗ
ಅದಕ್ಕೊಂಬತ್ತು ಛಿದ್ರವು ಅಂಬಿಗ
ಸಂಭ್ರಮದಿಂ ನೋಡಂಬಿಗ
ಅದರಿಂಬು ನೋಡಿ ನಡೆಸಂಬಿಗ

ಹೊಳೆಯ ಭರವ ನೋಡಂಬಿಗ
ಅದಕೆ ಸೆಳೆವು ಘನವಯ್ಯ ಅಂಬಿಗ
ಸುಳಿಯೊಳು ಮುಳುಗಿದೆ ಅಂಬಿಗ
ಎನ್ನ ಸೆಳೆದು ಕೊಂಡೊಯ್ಯೊ ಅಂಬಿಗ

ಆರು ತೆರೆಯ ನೋಡಂಬಿಗ
ಅದು ಮೀರಿ ಬರುತಿದೆ ನೋಡಂಬಿಗ
ಯಾರಿಂದಲಾಗದು ಅಂಬಿಗ
ಅದ ನಿವಾರಿಸಿ ದಾಟಿಸೊ ಅಂಬಿಗ

ಸತ್ಯವೆಂಬುದೆ ಹುಟ್ಟಂಬಿಗ
ಸದಾ ಭಕ್ತಿಯೆಂಬುದೆ ಪಥವಂಬಿಗ
ನಿತ್ಯಮೂರುತಿ ನಮ್ಮ ಪುರಂದರ ವಿಠ್ಠಲನ
ಮುಕ್ತಿ ಮಂಟಪಕೊಯ್ಯೊ ಅಂಬಿಗ

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......