Tuesday, March 22, 2011

ಗುರುವಿನ ಗುಲಾಮನಾಗುವ ತನಕ

ಗುರುವಿನ ಗುಲಾಮನಾಗುವ ತನಕ
ದೊರೆಯದಣ್ಣ ಮುಕುತಿ
ಪರಿ ಪರಿ ಶಾಸ್ತ್ರವನೋದಿದರೇನು
ವ್ಯರ್ಥವಾಯ್ತು ಭಕುತಿ

ಆರು ಶಾಸ್ತ್ರವ ಓದಿದರಿಲ್ಲ
ಮೂರು ಪುರಾಣವ ಮುಗಿಸಿದರಿಲ್ಲ
ಸಾರ ನ್ಯಾಯ ಕಥೆಗಳ ಕೇಳಿದರಿಲ್ಲ
ಧೀರನಾಗಿ ತಾ ಪೇಳಿದರಿಲ್ಲ

ಕೊರಳೊಳು ಮಾಲೆ ಧರಿಸಿದರಿಲ್ಲ,
ಬೆರಳೊಳು ಜಪಮಣಿ ಜಪಿಸಿದರಿಲ್ಲ
ಮರುಳನಾಗಿ ಶರೀರಕೆ ಬೂದಿ
ಒರೆಸಿಕೊಂಡು ತಾ ತಿರುಗಿದರಿಲ್ಲ

ನಾರಿಯ ಭೋಗ ಅಳಿಸಿದರಿಲ್ಲ
ಶಾರೀರಿಕ ಸುಖವ ಬಿಡಿಸಿದರಿಲ್ಲ
ನಾರದವರದ ಪುರಂದರ ವಿಠ್ಠಲನ
ಸೇರಿಕೊಂಡು ತಾ ಪಡೆಯುವ ತನಕ

5 comments:

ನುಡಿಮುತ್ತು

 ಕಲ್ಪನೆಗೆ ಹೂ ವಾದರೇನು.., ಮುಳ್ಳಾದರೇನು ? ಕಲ್ಪಿಸುವವರ ಹೃದಯ ಮೃದುವಾಗಿದ್ದರೆ ಮುಳ್ಳು ಕೂಡ ಮೃದುವಾಗಿ ಹೂವಾಗ ಬಲ್ಲದು