Tuesday, March 22, 2011

ಗುರುವಿನ ಗುಲಾಮನಾಗುವ ತನಕ

ಗುರುವಿನ ಗುಲಾಮನಾಗುವ ತನಕ
ದೊರೆಯದಣ್ಣ ಮುಕುತಿ
ಪರಿ ಪರಿ ಶಾಸ್ತ್ರವನೋದಿದರೇನು
ವ್ಯರ್ಥವಾಯ್ತು ಭಕುತಿ

ಆರು ಶಾಸ್ತ್ರವ ಓದಿದರಿಲ್ಲ
ಮೂರು ಪುರಾಣವ ಮುಗಿಸಿದರಿಲ್ಲ
ಸಾರ ನ್ಯಾಯ ಕಥೆಗಳ ಕೇಳಿದರಿಲ್ಲ
ಧೀರನಾಗಿ ತಾ ಪೇಳಿದರಿಲ್ಲ

ಕೊರಳೊಳು ಮಾಲೆ ಧರಿಸಿದರಿಲ್ಲ,
ಬೆರಳೊಳು ಜಪಮಣಿ ಜಪಿಸಿದರಿಲ್ಲ
ಮರುಳನಾಗಿ ಶರೀರಕೆ ಬೂದಿ
ಒರೆಸಿಕೊಂಡು ತಾ ತಿರುಗಿದರಿಲ್ಲ

ನಾರಿಯ ಭೋಗ ಅಳಿಸಿದರಿಲ್ಲ
ಶಾರೀರಿಕ ಸುಖವ ಬಿಡಿಸಿದರಿಲ್ಲ
ನಾರದವರದ ಪುರಂದರ ವಿಠ್ಠಲನ
ಸೇರಿಕೊಂಡು ತಾ ಪಡೆಯುವ ತನಕ

5 comments:

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...