ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Tuesday, March 22, 2011

ಗುರುವಿನ ಗುಲಾಮನಾಗುವ ತನಕ

ಗುರುವಿನ ಗುಲಾಮನಾಗುವ ತನಕ
ದೊರೆಯದಣ್ಣ ಮುಕುತಿ
ಪರಿ ಪರಿ ಶಾಸ್ತ್ರವನೋದಿದರೇನು
ವ್ಯರ್ಥವಾಯ್ತು ಭಕುತಿ

ಆರು ಶಾಸ್ತ್ರವ ಓದಿದರಿಲ್ಲ
ಮೂರು ಪುರಾಣವ ಮುಗಿಸಿದರಿಲ್ಲ
ಸಾರ ನ್ಯಾಯ ಕಥೆಗಳ ಕೇಳಿದರಿಲ್ಲ
ಧೀರನಾಗಿ ತಾ ಪೇಳಿದರಿಲ್ಲ

ಕೊರಳೊಳು ಮಾಲೆ ಧರಿಸಿದರಿಲ್ಲ,
ಬೆರಳೊಳು ಜಪಮಣಿ ಜಪಿಸಿದರಿಲ್ಲ
ಮರುಳನಾಗಿ ಶರೀರಕೆ ಬೂದಿ
ಒರೆಸಿಕೊಂಡು ತಾ ತಿರುಗಿದರಿಲ್ಲ

ನಾರಿಯ ಭೋಗ ಅಳಿಸಿದರಿಲ್ಲ
ಶಾರೀರಿಕ ಸುಖವ ಬಿಡಿಸಿದರಿಲ್ಲ
ನಾರದವರದ ಪುರಂದರ ವಿಠ್ಠಲನ
ಸೇರಿಕೊಂಡು ತಾ ಪಡೆಯುವ ತನಕ

5 comments: