Wednesday, March 23, 2011

ತೇಲಿಸೊ ಇಲ್ಲ ಮುಳುಗಿಸೊ ನಿನ್ನ

ತೇಲಿಸೊ ಇಲ್ಲ ಮುಳುಗಿಸೊ ನಿನ್ನ
ಕಾಲಿಗೆ ಬಿದ್ದೇನೊ ಪರಮ ಕೃಪಾಳೊ || ಪ ||

ಸತಿಸುತ ಧನದಾಸೆ ಎಂದೆಂಬ ಮೋಹದಿ
ಹಿತದಿಂದ ಅತಿ ನೊಂದು ಬೆಂಡಾದೆನೊ
( ಗತಿಕೊಡುವರ ಕಾಣೆ ಮತಿಯ ಪಾಲಿಸೊ ) ೨ ಲಕ್ಷ್ಮೀ
ಪತಿ ನಿನ್ನ ಚರಣದ ಸ್ಮರಣೆ ಇತ್ತೆನಗೆ || ೧ ||

ಜರೆ ರೋಗ ದಾರಿದ್ರ್ಯ ಕಶ್ಮಲವೆಂತೆಂಬ
ಶರಧಿಯೊಳಗೆ ಬಿದ್ದು ಮುಳುಗಿದೆನೊ
ಸ್ಥಿರವಲ್ಲ ದೇಹವು ನೆರೆನಂಬಿದೆನು
ಸ್ಥಿರವಲ್ಲ ದೇಹವು ನೆರೆನಂಬಿದೆ ನಿನ್ನ
ಕರುಣಾಭಯವಿತ್ತು ಪಾಲಿಸೊ ಹರಿಯೆ || ೨ ||

ದೋಷವುಳ್ಳವ ನಾನು ಭಾಷೆಯುಳ್ಳವ ನೀನು
ಮೋಸ ಹೋದೆನು ಭಕ್ತಿ ರಸವ ಬಿಟ್ಟು
(ಶೇಷಶಯನ ಶ್ರೀ ಪುರಂದರ ವಿಠ್ಠಲನ ) ೨
ದಾಸರ ಸಂಗವಿತ್ತು ಪಾಲಿಸೊ ಹರಿಯೆ || ೩ ||

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......