Sunday, March 27, 2011

ರಾಮ ನಾಮ ಪಾಯಸಕ್ಕೆ

ರಾಮ ನಾಮ ಪಾಯಸಕ್ಕೆ
ಕೃಷ್ಣ ನಾಮ ಸಕ್ಕರೆ
ವಿಠ್ಠಲ ನಾಮ ತುಪ್ಪವ ಸೇರಿಸಿ
ಬಾಯ ಚಪ್ಪರಿಸಿರೋ

ಒಮ್ಮಾನ ಗೋಧಿಯ ತಂದು
ವೈರಾಗ್ಯ ಕಲ್ಲಲಿ ಬೀಸಿ
ಸುಮ್ಮಾನೆ ಸಜ್ಜಿಗೆ ತೆಗೆದು
ಗಮ್ಮಾನೆ ಶಾವಿಗೆ ಹೊಸೆದು

ಹೃದಯವೆಂಬೊ ಮಡಕೆಯಲಿ
ಭಾವವೆಂಬೊ ಎಸರಲಿ
ಬುದ್ಧಿಯಿಂದ ಪಾಕ ಮಾಡಿ
ಹರಿವಾಣಕೆ ಬಡಿಸಿಕೊಂಡು

ಆನಂದ ಆನಂದವೆಂಬೊ ತೇಗು
ಬಂದಿತು ಕಾಣಿರೊ
ಆನಂದ ಮೂರುತಿ ನಮ್ಮ
ಪುರಂದರ ವಿಠ್ಠಲನ ನೆನೆಯಿರೊ

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......