ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Sunday, March 27, 2011

ರಾಮ ನಾಮ ಪಾಯಸಕ್ಕೆ

ರಾಮ ನಾಮ ಪಾಯಸಕ್ಕೆ
ಕೃಷ್ಣ ನಾಮ ಸಕ್ಕರೆ
ವಿಠ್ಠಲ ನಾಮ ತುಪ್ಪವ ಸೇರಿಸಿ
ಬಾಯ ಚಪ್ಪರಿಸಿರೋ

ಒಮ್ಮಾನ ಗೋಧಿಯ ತಂದು
ವೈರಾಗ್ಯ ಕಲ್ಲಲಿ ಬೀಸಿ
ಸುಮ್ಮಾನೆ ಸಜ್ಜಿಗೆ ತೆಗೆದು
ಗಮ್ಮಾನೆ ಶಾವಿಗೆ ಹೊಸೆದು

ಹೃದಯವೆಂಬೊ ಮಡಕೆಯಲಿ
ಭಾವವೆಂಬೊ ಎಸರಲಿ
ಬುದ್ಧಿಯಿಂದ ಪಾಕ ಮಾಡಿ
ಹರಿವಾಣಕೆ ಬಡಿಸಿಕೊಂಡು

ಆನಂದ ಆನಂದವೆಂಬೊ ತೇಗು
ಬಂದಿತು ಕಾಣಿರೊ
ಆನಂದ ಮೂರುತಿ ನಮ್ಮ
ಪುರಂದರ ವಿಠ್ಠಲನ ನೆನೆಯಿರೊ

No comments:

Post a Comment