Sunday, March 27, 2011

ರಾಮ ನಾಮ ಪಾಯಸಕ್ಕೆ

ರಾಮ ನಾಮ ಪಾಯಸಕ್ಕೆ
ಕೃಷ್ಣ ನಾಮ ಸಕ್ಕರೆ
ವಿಠ್ಠಲ ನಾಮ ತುಪ್ಪವ ಸೇರಿಸಿ
ಬಾಯ ಚಪ್ಪರಿಸಿರೋ

ಒಮ್ಮಾನ ಗೋಧಿಯ ತಂದು
ವೈರಾಗ್ಯ ಕಲ್ಲಲಿ ಬೀಸಿ
ಸುಮ್ಮಾನೆ ಸಜ್ಜಿಗೆ ತೆಗೆದು
ಗಮ್ಮಾನೆ ಶಾವಿಗೆ ಹೊಸೆದು

ಹೃದಯವೆಂಬೊ ಮಡಕೆಯಲಿ
ಭಾವವೆಂಬೊ ಎಸರಲಿ
ಬುದ್ಧಿಯಿಂದ ಪಾಕ ಮಾಡಿ
ಹರಿವಾಣಕೆ ಬಡಿಸಿಕೊಂಡು

ಆನಂದ ಆನಂದವೆಂಬೊ ತೇಗು
ಬಂದಿತು ಕಾಣಿರೊ
ಆನಂದ ಮೂರುತಿ ನಮ್ಮ
ಪುರಂದರ ವಿಠ್ಠಲನ ನೆನೆಯಿರೊ

No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...