Thursday, March 31, 2011

ಶರಣು ಸಿದ್ಧಿವಿನಾಯಕ ಶರಣು ವಿದ್ಯಾಪ್ರದಾಯಕ

ಶರಣು ಸಿದ್ಧಿವಿನಾಯಕ ಶರಣು ವಿದ್ಯಾಪ್ರದಾಯಕ
ಶರಣು ಪಾರ್ವತಿ ತನಯ ಮೂರುತಿ ಶರಣು ಮೂಷಿಕ ವಾಹನ || ಪ ||
ಶರಣು ಶರಣು ಶರಣು ಶರಣು ಶರಣು ಸಿದ್ಧಿವಿನಾಯಕ

ನಿಟಿಲ ನೇತ್ರನೆ ದೇವಿ ಸುತನೆ ನಾಗಭೂಷಣ ಪ್ರಿಯನೆ
ತಟಿಲತಾಂಕಿತ ಕೋಮಲಾಂಗನೆ ಕರ್ಣಕುಂಡಲಧಾರನೆ || ಶರಣು ಶರಣು ||

ಬಟ್ಟ ಮುತ್ತಿನ ಪದಕಹಾರನೆ ಬಾಹುಹಸ್ತಚತುಷ್ಟನೆ
ಇಟ್ಟ ತೊಡುಗೆಯ ಹೇಮ ಕಂಕಣ ಪಾಶ ಅಂಕುಶಧಾರನೆ || ಶರಣು ಶರಣು ||

ಕುಕ್ಷಿಮಹಾಲಂಬೋದರನೆ ಇಕ್ಷುಛಾಪನ ಗೆಲಿದನೆ
ಪಕ್ಷಿವಾಹನ ಸಿರಿ ಪುರಂದರ ವಿಠ್ಠಲನ ನಿಜ ದಾಸನೆ || ಶರಣು ಶರಣು ||

1 comment:

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......