ಬಂದದೆಲ್ಲ ಬರಲಿ
ಗೋವಿಂದನ ದಯ ನಮಗಿರಲಿ
ಅರಗಿನ ಮನೆಯೊಳಗಂದು
ಪಾಂಡವರನು ಕೊಲಬೇಕೆಂದು
ದುರುಳ ಕೌರವ ಬಂದು ಅತಿ
ಹರುಷದಲಿರುತರಿಲಂದು
ಹರಿ ಕೃಪೆ ಅವರಲ್ಲಿದ್ದ ಕಾರಣ
ಘೋರ ದುರಿತ ಬಯಲಾದುದಲ್ಲವೆ
ಆರು ಒಲಿಯದರಿಲೆನ್ನ
ಮುರಾರಿ ಎನಗೆ ಪ್ರಸನ್ನ
ಹೋರುವ ದುರಿತ ಬನ್ನ
ಅದ ನಿವಾರಿಪ ಕರುಣ ಸಂಪನ್ನ
ಸಿರಿ ರಮಣನ ಸಿರಿಚರಣ ಶರಣರಿಗೆ
ಕ್ರೂರ ಯಮನು ಶರಣಾಗತನಲ್ಲವೆ
ಸಿಂಗನ ಪೆಗಲೇರಿದವಗೆ
ಕರಿ ಭಂಗವೇಕೆ ಮತ್ತವಗೆ
ರಂಗನ ದಯೆವುಳ್ಳವಗೆ
ಭವ ಭಂಗಗಳೇತಕ್ಕವಗೆ
ಮಂಗಳಮಹಿಮ ಪುರಂದರ ವಿಠ್ಠಲ
ಶುಭಾಂಗನ ದಯವೊಂದಿದ್ದರೆ ಸಾಲದೆ
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Post Comments (Atom)
"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M
RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು ಬೆಂಬಲಿಸುವ ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...
No comments:
Post a Comment