ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ - kannada.info@gmail.com |.

Saturday, March 26, 2011

ಬಂದದೆಲ್ಲ ಬರಲಿ

ಬಂದದೆಲ್ಲ ಬರಲಿ
ಗೋವಿಂದನ ದಯ ನಮಗಿರಲಿ

ಅರಗಿನ ಮನೆಯೊಳಗಂದು
ಪಾಂಡವರನು ಕೊಲಬೇಕೆಂದು
ದುರುಳ ಕೌರವ ಬಂದು ಅತಿ
ಹರುಷದಲಿರುತರಿಲಂದು
ಹರಿ ಕೃಪೆ ಅವರಲ್ಲಿದ್ದ ಕಾರಣ
ಘೋರ ದುರಿತ ಬಯಲಾದುದಲ್ಲವೆ

ಆರು ಒಲಿಯದರಿಲೆನ್ನ
ಮುರಾರಿ ಎನಗೆ ಪ್ರಸನ್ನ
ಹೋರುವ ದುರಿತ ಬನ್ನ
ಅದ ನಿವಾರಿಪ ಕರುಣ ಸಂಪನ್ನ
ಸಿರಿ ರಮಣನ ಸಿರಿಚರಣ ಶರಣರಿಗೆ
ಕ್ರೂರ ಯಮನು ಶರಣಾಗತನಲ್ಲವೆ

ಸಿಂಗನ ಪೆಗಲೇರಿದವಗೆ
ಕರಿ ಭಂಗವೇಕೆ ಮತ್ತವಗೆ
ರಂಗನ ದಯೆವುಳ್ಳವಗೆ
ಭವ ಭಂಗಗಳೇತಕ್ಕವಗೆ
ಮಂಗಳಮಹಿಮ ಪುರಂದರ ವಿಠ್ಠಲ
ಶುಭಾಂಗನ ದಯವೊಂದಿದ್ದರೆ ಸಾಲದೆ

No comments:

Post a Comment