Monday, March 21, 2011

ಡೊಂಕು ಬಾಲದ ನಾಯಕರೆ

ಡೊಂಕು ಬಾಲದ ನಾಯಕರೆ
ನೀವೇನೂಟವ ಮಾಡುವಿರಿ

ಕಣಕ ಕುಟ್ಟೋ ಅಲ್ಲಿಗೆ ಹೋಗಿ
ಹಣಕಿ ಇಣಕಿ ನೋಡುವಿರಿ
ಕಣಕ ಕುಟ್ಟೋ ಒನಕೆಲಿ ಬಡಿದರೆ
ಕಂಞ ಕುಂಞ ಕಂಞ ಕುಂಞ ಮಾಡುವಿರಿ

ಹುಗ್ಗಿ ಮಾಡೋ ಅಲ್ಲಿಗೆ ಹೋಗಿ
ತಗ್ಗಿ ಬಗ್ಗಿ ನೋಡುವಿರಿ
ಹುಗ್ಗಿ ಮಾಡೋ ಸೌಟಲಿ ಬಡಿದರೆ
ಕಂಞ ಕುಂಞ ಕಂಞ ಕುಂಞ ಮಾಡುವಿರಿ

ಹಿರೇ ಬೀದಿಯಲಿ ಓಡುವಿರಿ
ಕರೇ ಬೂದಿಯಲಿ ಹೊರಳುವಿರಿ
ಪುರಂದರ ವಿಠ್ಠಲರಾಯನ ಈ ಪರಿ
ಮರೆತು ಸದಾ ನೀವು ಚಲಿಸುವಿರಿ

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......