Saturday, March 19, 2011

ಅನುಗಾಲವು ಚಿಂತೆ

ಅನುಗಾಲವು ಚಿಂತೆ ಜೀವಕೆ ಮನವು
ಶ್ರೀರಂಗನೋಳ್ ಮೆಚ್ಚುವ ತನಕ

ಸತಿಯಿದ್ದರು ಚಿಂತೆ, ಸತಿಯಿಲ್ಲದ ಚಿಂತೆ
ಮತಿಹೀನ ಸತಿಯು ಆದರು ಚಿಂತೆ
ಪೃಥ್ವಿಯೊಳಗೆ ಸತಿ ಕಡು ಚೆಲ್ವೆಯಾದರೆ
ಮಿತಿ ಮೊದಲಿಲ್ಲದ ಮೋಹದ ಚಿಂತೆ

ಬಡವನಾದರು ಚಿಂತೆ, ಬಲ್ಲಿದನಾಗೆ ಚಿಂತೆ
ಹಿಡಿ ಹೊನ್ನು ಕೈಯೊಳು ಇದ್ದರು ಚಿಂತೆ
ಪೊಡವಿಯೊಳಗೆ ನಮ್ಮ ಪುರಂದರ ವಿಠ್ಠಲನ
ಬಿಡದೆ ಧ್ಯಾನಿಸು, ಚಿಂತೆ ನಿಶ್ಚಿಂತೆ

No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...