Saturday, March 19, 2011

ಅನುಗಾಲವು ಚಿಂತೆ

ಅನುಗಾಲವು ಚಿಂತೆ ಜೀವಕೆ ಮನವು
ಶ್ರೀರಂಗನೋಳ್ ಮೆಚ್ಚುವ ತನಕ

ಸತಿಯಿದ್ದರು ಚಿಂತೆ, ಸತಿಯಿಲ್ಲದ ಚಿಂತೆ
ಮತಿಹೀನ ಸತಿಯು ಆದರು ಚಿಂತೆ
ಪೃಥ್ವಿಯೊಳಗೆ ಸತಿ ಕಡು ಚೆಲ್ವೆಯಾದರೆ
ಮಿತಿ ಮೊದಲಿಲ್ಲದ ಮೋಹದ ಚಿಂತೆ

ಬಡವನಾದರು ಚಿಂತೆ, ಬಲ್ಲಿದನಾಗೆ ಚಿಂತೆ
ಹಿಡಿ ಹೊನ್ನು ಕೈಯೊಳು ಇದ್ದರು ಚಿಂತೆ
ಪೊಡವಿಯೊಳಗೆ ನಮ್ಮ ಪುರಂದರ ವಿಠ್ಠಲನ
ಬಿಡದೆ ಧ್ಯಾನಿಸು, ಚಿಂತೆ ನಿಶ್ಚಿಂತೆ

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......