Saturday, March 19, 2011

ಅನುಗಾಲವು ಚಿಂತೆ

ಅನುಗಾಲವು ಚಿಂತೆ ಜೀವಕೆ ಮನವು
ಶ್ರೀರಂಗನೋಳ್ ಮೆಚ್ಚುವ ತನಕ

ಸತಿಯಿದ್ದರು ಚಿಂತೆ, ಸತಿಯಿಲ್ಲದ ಚಿಂತೆ
ಮತಿಹೀನ ಸತಿಯು ಆದರು ಚಿಂತೆ
ಪೃಥ್ವಿಯೊಳಗೆ ಸತಿ ಕಡು ಚೆಲ್ವೆಯಾದರೆ
ಮಿತಿ ಮೊದಲಿಲ್ಲದ ಮೋಹದ ಚಿಂತೆ

ಬಡವನಾದರು ಚಿಂತೆ, ಬಲ್ಲಿದನಾಗೆ ಚಿಂತೆ
ಹಿಡಿ ಹೊನ್ನು ಕೈಯೊಳು ಇದ್ದರು ಚಿಂತೆ
ಪೊಡವಿಯೊಳಗೆ ನಮ್ಮ ಪುರಂದರ ವಿಠ್ಠಲನ
ಬಿಡದೆ ಧ್ಯಾನಿಸು, ಚಿಂತೆ ನಿಶ್ಚಿಂತೆ

No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...