Thursday, March 24, 2011

ನಾ ಮಾಡಿದ ಕರ್ಮ ಬಲವಂತವಾದರೆ

ನಾ ಮಾಡಿದ ಕರ್ಮ ಬಲವಂತವಾದರೆ
ನೀ ಮಾಡುವುದೇನೋ ದೇವ

ಸಾಮಾನ್ಯವಲ್ಲಿದು ಬ್ರಹ್ಮ ಬರೆದ ಬರಹ
ನೇಮದಿಂದಲಿ ಎನ್ನ ಹಣೆಯಲ್ಲಿ ಬರೆದುದಕೆ

ಅತಿಥಿಗಳಿಗೆ ಅನ್ನ ಕೊಟ್ಟವನಲ್ಲ ಪರ
ಸತಿಯರ ಸಂಘಗಳ ಬಿಟ್ಟವನಲ್ಲ
ಮತಿಹೀನ ನಾನಾಗಿ ಮರುಳಾಗಿದ್ದೆನೊ ದೇವ
ಗತಿಯಾವುದಿನ್ನು ಗರುಡ ಗಮನ ಕೃಷ್ಣ

ಅನ್ನಪಾನಂಗಳಿಗೆ ಅಗ್ರಗಣ್ಯನಾಗಿ
ಸ್ನಾನ ಸಂಧ್ಯಾದಿ ಜಪ ತಪವ ನೀಗಿ
ದಾನವಾಂತಕ ನಿನ್ನ ಧ್ಯಾನವ ಮಾಡದೆ
ಶ್ವಾನನಂತೆ ಮನೆ ಮನೆ ತಿರುಗತಲಿದ್ದೆ

ಇನ್ನಾದರೂ ನಿನ್ನ ದಾಸರ ಸಂಘವಿತ್ತು
ಮನ್ನಿಸಿ ಸಲಹಯ್ಯ ಮನ್ಮಥ ಜನಕ
ಅನ್ಯರೊಬ್ಬರ ಕಾಣೆ ಆಧರಿಸುವರಿಲ್ಲ
ಪನ್ನಗಶಯನ ಪುರಂದರ ವಿಠ್ಠಲ

No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...