ನಾ ಮಾಡಿದ ಕರ್ಮ ಬಲವಂತವಾದರೆ
ನೀ ಮಾಡುವುದೇನೋ ದೇವ
ಸಾಮಾನ್ಯವಲ್ಲಿದು ಬ್ರಹ್ಮ ಬರೆದ ಬರಹ
ನೇಮದಿಂದಲಿ ಎನ್ನ ಹಣೆಯಲ್ಲಿ ಬರೆದುದಕೆ
ಅತಿಥಿಗಳಿಗೆ ಅನ್ನ ಕೊಟ್ಟವನಲ್ಲ ಪರ
ಸತಿಯರ ಸಂಘಗಳ ಬಿಟ್ಟವನಲ್ಲ
ಮತಿಹೀನ ನಾನಾಗಿ ಮರುಳಾಗಿದ್ದೆನೊ ದೇವ
ಗತಿಯಾವುದಿನ್ನು ಗರುಡ ಗಮನ ಕೃಷ್ಣ
ಅನ್ನಪಾನಂಗಳಿಗೆ ಅಗ್ರಗಣ್ಯನಾಗಿ
ಸ್ನಾನ ಸಂಧ್ಯಾದಿ ಜಪ ತಪವ ನೀಗಿ
ದಾನವಾಂತಕ ನಿನ್ನ ಧ್ಯಾನವ ಮಾಡದೆ
ಶ್ವಾನನಂತೆ ಮನೆ ಮನೆ ತಿರುಗತಲಿದ್ದೆ
ಇನ್ನಾದರೂ ನಿನ್ನ ದಾಸರ ಸಂಘವಿತ್ತು
ಮನ್ನಿಸಿ ಸಲಹಯ್ಯ ಮನ್ಮಥ ಜನಕ
ಅನ್ಯರೊಬ್ಬರ ಕಾಣೆ ಆಧರಿಸುವರಿಲ್ಲ
ಪನ್ನಗಶಯನ ಪುರಂದರ ವಿಠ್ಠಲ
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Post Comments (Atom)
ನುಡಿಮುತ್ತು
ಕಲ್ಪನೆಗೆ ಹೂ ವಾದರೇನು.., ಮುಳ್ಳಾದರೇನು ? ಕಲ್ಪಿಸುವವರ ಹೃದಯ ಮೃದುವಾಗಿದ್ದರೆ ಮುಳ್ಳು ಕೂಡ ಮೃದುವಾಗಿ ಹೂವಾಗ ಬಲ್ಲದು
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮುಂಗೋಳಿ ಕೂಗ್ಯಾವು ಮೂಡು ಕೆಂಪೇರ್ಯಾವು ಸ್ವಾಮೀ ನನ್ನಯ್ಯ ರಥವೇರಿ ಬರುವಾಗ ನಾವೆದ್ದು ಕೈಯ್ಯ ಮುಗುದೇವು ಮಕ್ಕಳಾಟವು ಚಂದ ಮತ್ತೆ ಯೌವನ ಚಂದ ಮುಪ್ಪಿನಲಿ ಚಂದ ನರೆಗಡ...
No comments:
Post a Comment