Wednesday, March 23, 2011

ದುಗ್ಗಾಣಿ ಎಂಬೊದು....

ದುಗ್ಗಾಣಿ ಎಂಬೊದು ದುರ್ಜನ ಸಂಘ
ದುಗ್ಗಾಣಿ ಬಲು ಕೆಟ್ಟದಣ್ಣ

ಆಚಾರ ಹೇಳೋದು ದುಗ್ಗಾಣಿ
ಬಲು ನೀಚರ ಮಾಡೋದು ದುಗ್ಗಾಣಿ
ನಾಚಿಕೆಯಿಲ್ಲದೆ ಮನೆ ಮನೆ ತಿರುಗಿ
ಛೀ ಛೀ ಎನಿಸೋದು ದುಗ್ಗಾಣಿಯಣ್ಣ
(ದುಗ್ಗಾಣಿ ಎಂಬೊದು ..)

ನೆಂಟತನ ಹೇಳೋದು ದುಗ್ಗಾಣಿ
ಬಹುನೆಂಟರನೊಲಿಸುವುದು ದುಗ್ಗಾಣಿ
ಒಂಟೆ ಹಾಂಗೆ ಮೋರೆ ಮೇಲಕ್ಕೆ ಸೆಳಕೊಂಡು
ಕುಂಟನೆನಿಸೋದು ದುಗ್ಗಾಣಿಯಣ್ಣ
(ದುಗ್ಗಾಣಿ ಎಂಬೊದು ..)

ಮಾನವ ಹೇಳೋದು ದುಗ್ಗಾಣಿ
ಮಾನ ಹದೆಗೆಡಿಸೋದು ದುಗ್ಗಾಣಿ
ಬಹುಮಾನ ನಿಧಿ ಶ್ರೀ ಪುರಂದರ ವಿಠ್ಠಲನ
ಕಾಣಿಸದಿರುವುದು ದುಗ್ಗಾಣಿಯಣ್ಣ
(ದುಗ್ಗಾಣಿ ಎಂಬೊದು ..)

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......