Friday, March 25, 2011

ಪೋಗದಿರೆಲೊ ರಂಗ ಬಾಗಿಲಿಂದಾಚೆಗೆ

ಪೋಗದಿರೆಲೊ ರಂಗ ಬಾಗಿಲಿಂದಾಚೆಗೆ
ಭಾಗವತರು ಕಂಡರೆತ್ತಿಕೊಂಡೊಯ್ವರೊ

ಸುರಮುನಿಗಳು ತಮ್ಮ ಹೃದಯ ಗಹ್ವರದಲ್ಲಿ
ಪರಮಾತ್ಮನ ಕಾಣದೆ ಅರಸುವರು
ದೊರಕದ ವಸ್ತುವು ದೊರಕಿತು ತಮಗೆಂದು
ಹರುಷದಿಂದಲಿ ನಿನ್ನ ಕರೆದೆತ್ತಿಕೊಂಬರು

ಅಗಣಿತ ಗುಣ ನಿನ್ನ ಜಗದ ನಾರಿಯರೆಲ್ಲ
ಹಗೆಯಾಗಿ ನೋಡ್ವರೋ ಗೋಪಾಲನೆ
ಮಗುಗಳ ಮಾಣಿಕ್ಯ ತಗುಲಿತು ಕರಕೆಂದು
ವೇಗದಿಂದಲಿ ಬಂದು ಬಿಗಿದಪ್ಪಿಕೊಂಬರು

ದಿಟ್ಟ ನಾರಿಯರೆಲ್ಲ ಇಷ್ಟವ ಸಲಿಸೆಂದು
ಅಟ್ಟಟ್ಟಿ ಬೆನ್ನಿಂದೆ ತಿರುಗುವರು
ಸೃಷ್ಟೀಶ ಪುರಂದರ ವಿಠ್ಠಲ ರಾಯಗೆ
ಇಷ್ಟಿಷ್ಟು ಬೆಣ್ಣೆಯ ಕೊಟ್ಟೆನೋ ರಂಗಯ್ಯ

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......