Thursday, March 24, 2011

ನಾ ನಿನ್ನ ಧ್ಯಾನದೊಳಿರಲು ಮಿಕ್ಕ

ನಾ ನಿನ್ನ ಧ್ಯಾನದೊಳಿರಲು ಮಿಕ್ಕ
ಹೀನ ಮಾನವರೇನು ಮಾಡಬಲ್ಲರೊ ರಂಗ

ಮತ್ಸರಿಸುವರೆಲ್ಲ ಕೂಡಿ ಮಾಡುವರೇನು
ಅಚ್ಯುತ ನಿನ್ನ ದಯೆಯೆನ್ನೊಳಿರಲು
ವಾತ್ಸಲ್ಯ ಬಿಡದಿರು ನಿನ್ನ ನಂಬಿದೆ ದೇವ
ಕಿಚ್ಚಿಗೆ ಇರುವೆ ಮುತ್ತುವುದೆ ಕೇಳೆಲೊ ರಂಗ

ಧಾಳಲಿ ಕುದುರೆ ವೈಯಾರದಿ ಕುಣಿಯಲು
ಧೂಳು ರವಿಯ ತಾ ಮುತ್ತುವುದೆ
ತಾಳಿದವರ ವಿರುದ್ಧ ಲೋಕದೊಳಗುಂಟೆ
ಗಾಳಿಗೆ ಗಿರಿಯು ಅಲ್ಲಾಡಬಲ್ಲದೆ

ಕನ್ನಡಿಯೊಳಗಣ ಗಂಟು ಕಂಡು ಕಳ್ಳ
ಕನ್ನವಿಕ್ಕಲವನ ವಶವಹುದೆ
ನಿನ್ನ ನಂಬಲು ಮುದ್ದು ಪುರಂದರ ವಿಠ್ಠಲ
ಚಿನ್ನಕ್ಕೆ ಪುಟವನಿಟ್ಟಂತೆ ಅಹುದೋ ರಂಗ

No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...