Thursday, March 24, 2011

ನಾ ನಿನ್ನ ಧ್ಯಾನದೊಳಿರಲು ಮಿಕ್ಕ

ನಾ ನಿನ್ನ ಧ್ಯಾನದೊಳಿರಲು ಮಿಕ್ಕ
ಹೀನ ಮಾನವರೇನು ಮಾಡಬಲ್ಲರೊ ರಂಗ

ಮತ್ಸರಿಸುವರೆಲ್ಲ ಕೂಡಿ ಮಾಡುವರೇನು
ಅಚ್ಯುತ ನಿನ್ನ ದಯೆಯೆನ್ನೊಳಿರಲು
ವಾತ್ಸಲ್ಯ ಬಿಡದಿರು ನಿನ್ನ ನಂಬಿದೆ ದೇವ
ಕಿಚ್ಚಿಗೆ ಇರುವೆ ಮುತ್ತುವುದೆ ಕೇಳೆಲೊ ರಂಗ

ಧಾಳಲಿ ಕುದುರೆ ವೈಯಾರದಿ ಕುಣಿಯಲು
ಧೂಳು ರವಿಯ ತಾ ಮುತ್ತುವುದೆ
ತಾಳಿದವರ ವಿರುದ್ಧ ಲೋಕದೊಳಗುಂಟೆ
ಗಾಳಿಗೆ ಗಿರಿಯು ಅಲ್ಲಾಡಬಲ್ಲದೆ

ಕನ್ನಡಿಯೊಳಗಣ ಗಂಟು ಕಂಡು ಕಳ್ಳ
ಕನ್ನವಿಕ್ಕಲವನ ವಶವಹುದೆ
ನಿನ್ನ ನಂಬಲು ಮುದ್ದು ಪುರಂದರ ವಿಠ್ಠಲ
ಚಿನ್ನಕ್ಕೆ ಪುಟವನಿಟ್ಟಂತೆ ಅಹುದೋ ರಂಗ

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......