ನಾ ನಿನ್ನ ಧ್ಯಾನದೊಳಿರಲು ಮಿಕ್ಕ
ಹೀನ ಮಾನವರೇನು ಮಾಡಬಲ್ಲರೊ ರಂಗ
ಮತ್ಸರಿಸುವರೆಲ್ಲ ಕೂಡಿ ಮಾಡುವರೇನು
ಅಚ್ಯುತ ನಿನ್ನ ದಯೆಯೆನ್ನೊಳಿರಲು
ವಾತ್ಸಲ್ಯ ಬಿಡದಿರು ನಿನ್ನ ನಂಬಿದೆ ದೇವ
ಕಿಚ್ಚಿಗೆ ಇರುವೆ ಮುತ್ತುವುದೆ ಕೇಳೆಲೊ ರಂಗ
ಧಾಳಲಿ ಕುದುರೆ ವೈಯಾರದಿ ಕುಣಿಯಲು
ಧೂಳು ರವಿಯ ತಾ ಮುತ್ತುವುದೆ
ತಾಳಿದವರ ವಿರುದ್ಧ ಲೋಕದೊಳಗುಂಟೆ
ಗಾಳಿಗೆ ಗಿರಿಯು ಅಲ್ಲಾಡಬಲ್ಲದೆ
ಕನ್ನಡಿಯೊಳಗಣ ಗಂಟು ಕಂಡು ಕಳ್ಳ
ಕನ್ನವಿಕ್ಕಲವನ ವಶವಹುದೆ
ನಿನ್ನ ನಂಬಲು ಮುದ್ದು ಪುರಂದರ ವಿಠ್ಠಲ
ಚಿನ್ನಕ್ಕೆ ಪುಟವನಿಟ್ಟಂತೆ ಅಹುದೋ ರಂಗ
ಕನ್ನಡ ನಾಡು - ನುಡಿಗೆ ದುಡಿದವರ ಬಗ್ಗೆ... ಮಾಹಿತಿ ಸಂಗ್ರಹಿಸುವ ಒಂದು ಪುಟ್ಟ ಪ್ರಯಾತ್ನವೆ.. ನಮ್ಮನು ಮತ್ತು ಬ್ಲಾಗಿನ ಓರೆ ಕೋರೆಯನು ತಿದ್ದಲು, ಬ್ಲಾಗಿಗೆನಲ್ಲಿ ಬರೆಯಲು.. ನಿಮ್ಮ ಸಂಗ್ರಹವನು ಪ್ರಕಟಿಸಲು ನಮ್ಮನ್ನು ತಲುಪಲು - ಇ ಮೇಲ್ ಕಳುಹಿಸಿ kannada.info@gmail.com
Subscribe to:
Post Comments (Atom)
ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ
ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು. ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರದ ಕೋರಿಕೆ ತುಸು ವಿಭಿನ್ನ, ವಿಶಿಷ್ಟ. ಎರಡು ಕಾರಣಗಳಿಂದ. ಒಂದನೆಯದಾಗಿ, ಇದುವರೆಗಿನ ಕೋರಿಕೆಗಳೆಲ್...
-
ನಿಮ್ಮ ಮೆಚ್ಚಿನ FB ಪೋಸ್ಟುಗಳು... ==================== ಈ ವಾರ, ಕೋರಿಕೆಗೆ ಕೋರಿಕೆ! ಅಂದರೆ, ಈಶ್ವರ ಸಣಕಲ್ಲ ಅವರ ಪ್ರಖ್ಯಾತ ಕವಿತೆ "ಕೋರಿಕೆ" ಪ್ರಕ...
-
ಮೂಡುವನು ರವಿ ಮೂಡುವನು ಕತ್ತಲೊಡನೆ ಜಗಳಾಡುವನು ಪಂಜೆ ಮಂಗೇಶ ರಾಯರು ಮೂಡಣ ರಂಗಸ್ಥಳದಲಿ ನೆತ್ತರ ಮಾಡುವನು ಕುಣಿದಾಡುವನು ಬೆಳಕಿನ ಕಣ್ಣುಗಳಿ೦ದಾ ಸೂರ್ಯನು ನೋಡ...
No comments:
Post a Comment