Monday, March 21, 2011

ಕಲ್ಲು ಸಕ್ಕರೆ ಕೊಳ್ಳಿರೊ ನೀವೆಲ್ಲರು

ಕಲ್ಲು ಸಕ್ಕರೆ ಕೊಳ್ಳಿರೊ ನೀವೆಲ್ಲರು
ಕಲ್ಲು ಸಕ್ಕರೆ ಕೊಳ್ಳಿರೊ

ಕಲ್ಲು ಸಕ್ಕರೆ ಸವಿ ಬಲ್ಲವರೆ ಬಲ್ಲರು
ಪುಲ್ಲಲೋಚನ ಶ್ರೀ ಕೃಷ್ಣ ನಾಮವೆಂಬ

ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ
ಒತ್ತೊತ್ತಿ ಗೋಣಿಯೊಳ್ ತುಂಬುವುದಲ್ಲ
ಎತ್ತ ಹೋದರೂ ಬಾಡಿಗೆ ಸುಂಕವಿದಕಿಲ್ಲ
ಉತ್ತಮ ಸರಕಿದು ಅತಿ ಲಾಭ ತರುವಂಥ

ಸಂತೆ ಕಂತೆಗೆ ಹೋಗಿ ಶ್ರಮ ಪಡಿಸುವುದಲ್ಲ
ಸಂತೆಯೊಳಗೆ ಇದು ಮಾರುವುದಲ್ಲ
ಸಂತತ ಭಕ್ತರ ನಾಲಿಗೆ ಸವಿಗೊಂಬ
ಕಾಂತ ಪುರಂದರ ವಿಠ್ಠಲ ನಾಮವೆಂಬ

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......