Monday, March 21, 2011

ಕಲ್ಲು ಸಕ್ಕರೆ ಕೊಳ್ಳಿರೊ ನೀವೆಲ್ಲರು

ಕಲ್ಲು ಸಕ್ಕರೆ ಕೊಳ್ಳಿರೊ ನೀವೆಲ್ಲರು
ಕಲ್ಲು ಸಕ್ಕರೆ ಕೊಳ್ಳಿರೊ

ಕಲ್ಲು ಸಕ್ಕರೆ ಸವಿ ಬಲ್ಲವರೆ ಬಲ್ಲರು
ಪುಲ್ಲಲೋಚನ ಶ್ರೀ ಕೃಷ್ಣ ನಾಮವೆಂಬ

ಎತ್ತು ಹೇರುಗಳಿಂದ ಹೊತ್ತು ಮಾರುವುದಲ್ಲ
ಒತ್ತೊತ್ತಿ ಗೋಣಿಯೊಳ್ ತುಂಬುವುದಲ್ಲ
ಎತ್ತ ಹೋದರೂ ಬಾಡಿಗೆ ಸುಂಕವಿದಕಿಲ್ಲ
ಉತ್ತಮ ಸರಕಿದು ಅತಿ ಲಾಭ ತರುವಂಥ

ಸಂತೆ ಕಂತೆಗೆ ಹೋಗಿ ಶ್ರಮ ಪಡಿಸುವುದಲ್ಲ
ಸಂತೆಯೊಳಗೆ ಇದು ಮಾರುವುದಲ್ಲ
ಸಂತತ ಭಕ್ತರ ನಾಲಿಗೆ ಸವಿಗೊಂಬ
ಕಾಂತ ಪುರಂದರ ವಿಠ್ಠಲ ನಾಮವೆಂಬ

No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...