Sunday, March 20, 2011

ಕೃಷ್ಣಾ ಬಾರೋ , ಕೃಷ್ಣಾ ಬಾರೋ

ಕೃಷ್ಣಾ ಬಾರೋ , ಕೃಷ್ಣಾ ಬಾರೋ
 ಕೃಷ್ಣಯ್ಯ ನೀ ಬಾರಯ್ಯ || ಪಲ್ಲವಿ ||


ಸಣ್ಣ ಹೆಜ್ಜೆಗಳಿಟ್ಟು , ಗೆಜ್ಜೆ ನಾದಗಳಿಂದ || ಪ ||
 ಮನ್ಮಥ ಜನಕನೆ ಬೇಗನೆ ಬಾರೋ
ಕಮಲಾಪತಿ ನೀ ಬಾರೋ
ಅಮಿತ ಪರಾಕ್ರಮ ಶಂಕರ ಬಾರೋ
ಕಮನೀಯ ಗಾತ್ರನೆ ಬಾರಯ್ಯ ದೊರೆಯೇ || ಪ ||

  ಹಾಲು ಬೆಣ್ಣೆಗಳ ಕೈಯಲ್ಲಿ ಕೊಡುವೆ
ಮೇಲಾದಿ ಭಕ್ಷಗಳ ಮುಚ್ಚಿಟ್ಟು ತರುವೆ
ಜಾಲ ಮಾಡದೆ ನೀ ಬಾರಯ್ಯ ಮರಿಯೇ
ಬಾರಾ ಎನ ತಂದೆ ಪುರಂದರ ವಿಠ್ಠಲ || ಪ ||

No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...