Friday, April 29, 2011

ಅನಂತ ಪ್ರಣಯ - ದ ರಾ ಬೇಂದ್ರ

ಉತ್ತರದ್ರುವದಿಂ ದಕ್ಷಿಣದ್ರುವಕೂ
ಚುಂಬಕ ಗಾಳಿಯು ಬೀಸುತಿದೆ
ಸೂರ್ಯನ ಬಿಂಬಕೆ ಚಂದ್ರನ ಬಿಂಬವು
ರಂಜಿಸಿ ನಗೆಯಲಿ ಮೀಸುತಿದೆ.
ಭೂರಂಗಕೆ ಅಭಿಸಾರಕೆ ಕರೆಯುತ
ತಿಂಗಳು ತಿಂಗಳು ನವೆಯುತಿದೆ
ತುಂಬುತ ತುಳುಕುತ ತೀರುತ ತನ್ನೊಳು
ತಾನೇ ಸವಿಯನು ಸವಿಯುತಿದೆ.
ಭುವನ ಕುಸುಮಿಸಿ ಪುಲಕಿಸಿ ಮರಳಿಸಿ
ಕೋಟಿ ಕೋಟಿ ಸಲ ಹೊಸೆಯಿಸಿತು
ಮಿತ್ರನ ಮೈತ್ರಿಯ ಒಸಗೆ ಮಸಗದಿದೆ
ಮರುಕದ ದ್ಃಅರೆಯ ಮಸೆಯಿಸಿತು.
ಅಕ್ಷಿನಮೀಲನ ಮಾಡದೆ ನಕ್ಷ-
ತ್ರದ ಗಣ ಗಗನದಿ ಹಾರದಿದೆ
ಬಿದಿಗೆಯ ಬಿಂಬಾಧರದಲಿ ಇಂದಿಗು
ಮಿಲನದ ಚಿಹ್ನವು ತೋರದಿದೆ.

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...