Friday, April 29, 2011

ಅನಂತ ಪ್ರಣಯ - ದ ರಾ ಬೇಂದ್ರ

ಉತ್ತರದ್ರುವದಿಂ ದಕ್ಷಿಣದ್ರುವಕೂ
ಚುಂಬಕ ಗಾಳಿಯು ಬೀಸುತಿದೆ
ಸೂರ್ಯನ ಬಿಂಬಕೆ ಚಂದ್ರನ ಬಿಂಬವು
ರಂಜಿಸಿ ನಗೆಯಲಿ ಮೀಸುತಿದೆ.
ಭೂರಂಗಕೆ ಅಭಿಸಾರಕೆ ಕರೆಯುತ
ತಿಂಗಳು ತಿಂಗಳು ನವೆಯುತಿದೆ
ತುಂಬುತ ತುಳುಕುತ ತೀರುತ ತನ್ನೊಳು
ತಾನೇ ಸವಿಯನು ಸವಿಯುತಿದೆ.
ಭುವನ ಕುಸುಮಿಸಿ ಪುಲಕಿಸಿ ಮರಳಿಸಿ
ಕೋಟಿ ಕೋಟಿ ಸಲ ಹೊಸೆಯಿಸಿತು
ಮಿತ್ರನ ಮೈತ್ರಿಯ ಒಸಗೆ ಮಸಗದಿದೆ
ಮರುಕದ ದ್ಃಅರೆಯ ಮಸೆಯಿಸಿತು.
ಅಕ್ಷಿನಮೀಲನ ಮಾಡದೆ ನಕ್ಷ-
ತ್ರದ ಗಣ ಗಗನದಿ ಹಾರದಿದೆ
ಬಿದಿಗೆಯ ಬಿಂಬಾಧರದಲಿ ಇಂದಿಗು
ಮಿಲನದ ಚಿಹ್ನವು ತೋರದಿದೆ.

No comments:

Post a Comment

ನುಡಿಮುತ್ತು

 ಕಲ್ಪನೆಗೆ ಹೂ ವಾದರೇನು.., ಮುಳ್ಳಾದರೇನು ? ಕಲ್ಪಿಸುವವರ ಹೃದಯ ಮೃದುವಾಗಿದ್ದರೆ ಮುಳ್ಳು ಕೂಡ ಮೃದುವಾಗಿ ಹೂವಾಗ ಬಲ್ಲದು