Friday, April 29, 2011

ಅನಂತ ಪ್ರಣಯ - ದ ರಾ ಬೇಂದ್ರ

ಉತ್ತರದ್ರುವದಿಂ ದಕ್ಷಿಣದ್ರುವಕೂ
ಚುಂಬಕ ಗಾಳಿಯು ಬೀಸುತಿದೆ
ಸೂರ್ಯನ ಬಿಂಬಕೆ ಚಂದ್ರನ ಬಿಂಬವು
ರಂಜಿಸಿ ನಗೆಯಲಿ ಮೀಸುತಿದೆ.
ಭೂರಂಗಕೆ ಅಭಿಸಾರಕೆ ಕರೆಯುತ
ತಿಂಗಳು ತಿಂಗಳು ನವೆಯುತಿದೆ
ತುಂಬುತ ತುಳುಕುತ ತೀರುತ ತನ್ನೊಳು
ತಾನೇ ಸವಿಯನು ಸವಿಯುತಿದೆ.
ಭುವನ ಕುಸುಮಿಸಿ ಪುಲಕಿಸಿ ಮರಳಿಸಿ
ಕೋಟಿ ಕೋಟಿ ಸಲ ಹೊಸೆಯಿಸಿತು
ಮಿತ್ರನ ಮೈತ್ರಿಯ ಒಸಗೆ ಮಸಗದಿದೆ
ಮರುಕದ ದ್ಃಅರೆಯ ಮಸೆಯಿಸಿತು.
ಅಕ್ಷಿನಮೀಲನ ಮಾಡದೆ ನಕ್ಷ-
ತ್ರದ ಗಣ ಗಗನದಿ ಹಾರದಿದೆ
ಬಿದಿಗೆಯ ಬಿಂಬಾಧರದಲಿ ಇಂದಿಗು
ಮಿಲನದ ಚಿಹ್ನವು ತೋರದಿದೆ.

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......