Sunday, May 1, 2011

ನಾಯಿಮರಿ ನಾಯಿಮರಿ ತಿಂಡಿ ಬೇಕೆ

ನಾಯಿಮರಿ ನಾಯಿಮರಿ ತಿಂಡಿ ಬೇಕೆ
ತಿಂಡಿ ಬೇಕು ತೀರ್ಥ ಬೇಕು ಎಲ್ಲ ಬೇಕು

ನಾಯಿಮರಿ ನಿನಗೆ ತಿಂಡಿ ಏಕೆ ಬೇಕು
ತಿಂದು ಗಟ್ಟಿಯಾಗಿ ಮನೆಯ ಕಾಯಬೇಕು

ನಾಯಿಮರಿ ಕಳ್ಳ ಬಂದರೇನು ಮಾಡುವೆ
ಕ್ವೊಂ ಕ್ವೊಂ ಬೌ ಎಂದು ಕೂಗಿ ಪಾಡುವೆ

ಜಾಣಮರಿ ತಾಳು ಹೋಗಿ ತಿಂಡಿ ತರುವೆನು
ತಾ ನಿನ್ನ ಮನೆಯ ನಾನು ಕಾಯುತಿರುವೆನು

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...