Thursday, May 5, 2011

ಮೊಟ್ಮೊದಲು.

ನನಗೂನೆ ಯೆಂಡಕ್ಕು ಬಲ್ ಬಲೆ ದೋಸ್ತಿ.
ಕುಡದ್ ಬುಟ್ಟಾಗ್ ಆಡೋದು ನಂಗ್ ಪೂರ ಜಾಸ್ತಿ.
ನಂಗ್ ಎಸರು ಯೇಳ್ತಾರೆ - ರ್ರರ್ರರ್ರರ್ರತ್ನ.
ನಾನ್ ಆಡೋ ಪದಗೋಳು ಯೆಂಡದ್ ಪ್ರಯತ್ನ.

ಮಾಬಾರ್‍ತ ಬರೆಯಾಕೆ ಯಾಸಂಗ್ ಇನಾಯ್ಕ
ಸಿಕ್ದಂಗೆ ನಂಗ್ ಒಬ್ಬ ಬೇವಾರ್ಸಿನಾಯ್ಕ
ಸಿಕ್ಕೋನೆ, ನನ್ ಆಡ್ನ ಕೂಡಿಸ್ದ ಬರ್‍ದು!
ಏನ್ ಐತೊ ಯಾರ್ ಬಲ್ರು ಔಂಗ್ ಇರೊ ದರ್‍ದು!

’ಬರಕೊಂಡ್ರೆ ಬರಕೊಂಡ್ ಓಗ್, ನಿಂಗೂನೆ ಐಲು;
ಆದಸ್ಟೂ ಮಾಡಾನೆ ಸಾಯ ನಂಕೈಲು’
ಅಂದ್ಕಂಡ್ ಔನ್ ಬರದಿದ್ನ ಅಚ್ಗ್ ಆಕೋಕ್ ಒಪ್ಪಿ
ಕಳಿಸಿವ್ನಿ. ಬೈದೀರ ನನಗೇನ್ರ ತಪ್ಪಿ!

ಅಕ್ಸಾರ ಗಿಕ್ಸಾರ ನನಗೇನೂ ಬರ್‍ದು.
(ದೊಡ್ ಚಾಕ್ರಿ ಬೇಕಂದ್ರೆ ಓದೆ ಬೇಕು ದರ್‍ದು!)
ಪದಗೋಳು ಚಂದ್ ಇದ್ರೆ ಯೆಂಡಕ್ ಸಿಪಾರ್ಸಿ!
ಚಂದಾಗ್ ಇಲ್ದಿದ್ರನಕ ತಪ್ಗೆ ಬೇವಾರ್ಸಿ!

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...