Tuesday, May 10, 2011

ಕೂ ಕೂ ಎನುತಿದೆ ಬೆಳವಾ

ಕೂ ಕೂ ಎನುತಿದೆ ಬೆಳವಾ-ಬಂದು
ಹೊಕ್ಕಿತು ಭವವೆಂಬ ದುಖಃದ ಹಳುವ


ಪುರುಷನ ಬುಟ್ಟೀಲಿ ಇಟ್ಟು- ಬಹು
ಹರುಷದಿ ಹಳ್ಳದೂಳ್ ತೇಲಾಕ ಬಿಟ್ಟು

ಮನವೆಂಬ ಗೂಡಿನೊಳಿಟ್ಟು- ತನ್ನ
ತನುವೆಂಬ ಮರ್ಅದೊಳು ಹಾರಾಕ ಬಿಟ್ಟು

ಆನಂದದೊಳು ತಾನಿರಲು- ಸ್ವಾ
ನಂದಿ ರೆಖ್ಖೆಯ ಕೆದರುತಲಿರಲು,

ಜ್ನಾನದ ಬೆಳಕಿನೊಳಿಹುದು- ದೇವ
ಶಿಶುನಾಳಾಧೀಶ ಗೋವಿಂದನ ವರವು.

No comments:

Post a Comment

ಅಭೀರ' ಕಾದಂಬರಿ - ಅರ್ಜುನ್ ದೇವಾಲದಕೆರೆ

 ವಿದ್ಯೆ ಕಲಿಸುವವನು ಗುರುವಲ್ಲ, ಅವನು ಶಿಕ್ಷಕ. ವಿದ್ಯೆ ಕಲಿಸಿದ ಮೇಲೂ, ಬದುಕಿನ ಏಳು-ಬೀಳುಗಳಲ್ಲಿ ಕೊನೆವರೆಗೂ ಕೈ ಹಿಡಿದು ನಡೆಸುತ್ತಾನಲ್ಲ, ಅವನು ಗುರು. ತಾಂತ್ರಿಕ ಲೋ...