Tuesday, May 10, 2011

ಕೂ ಕೂ ಎನುತಿದೆ ಬೆಳವಾ

ಕೂ ಕೂ ಎನುತಿದೆ ಬೆಳವಾ-ಬಂದು
ಹೊಕ್ಕಿತು ಭವವೆಂಬ ದುಖಃದ ಹಳುವ


ಪುರುಷನ ಬುಟ್ಟೀಲಿ ಇಟ್ಟು- ಬಹು
ಹರುಷದಿ ಹಳ್ಳದೂಳ್ ತೇಲಾಕ ಬಿಟ್ಟು

ಮನವೆಂಬ ಗೂಡಿನೊಳಿಟ್ಟು- ತನ್ನ
ತನುವೆಂಬ ಮರ್ಅದೊಳು ಹಾರಾಕ ಬಿಟ್ಟು

ಆನಂದದೊಳು ತಾನಿರಲು- ಸ್ವಾ
ನಂದಿ ರೆಖ್ಖೆಯ ಕೆದರುತಲಿರಲು,

ಜ್ನಾನದ ಬೆಳಕಿನೊಳಿಹುದು- ದೇವ
ಶಿಶುನಾಳಾಧೀಶ ಗೋವಿಂದನ ವರವು.

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......