Wednesday, May 11, 2011

ಸೋರುತಿಹುದು ಮನೆಯ ಮಾಳಿಗಿ

ಸೋರುತಿಹುದು ಮನೆಯ ಮಾಳಿಗಿ
ಅಜ್ನಾನದಿಂದ
ಸೋರುತಿಹುದು ಮನೆಯ ಮಾಳಿಗಿ.

ಸೋರುತಿಹುದು ಮನೆಯ ಮಾಳಿಗಿ
ದಾರು ಗಟ್ಟಿ ಮಾಳ್ಪರಿಲ್ಲ
ಕಾಳ ಕತ್ತಲೆಯೊಳಗೆ ನಾನು
ಮೇಲಕೇರಿ ಹೋಗಲಾರೆ.

ಮುರುಕು ತೊಲೆಯು ಹುಳುಕು ಜಂತಿ
ಕೊರೆದು ಸರಿದು ಕೀಲ ಸಡಲಿ
ಹರುಕು ಚಪ್ಪರ ಜೇರುಗಿಂಡಿ
ಮೇಲಕೇರಿ ಹೋಗಲಾರೆ.

ಕರಕಿ ಹುಲ್ಲು ಕಸವು ಹತ್ತಿ
ಹರಿದು ಸಾಲು ಇರಬಿ ಮುತ್ತಿ
ಜಲದ ಭರದಿ ಸರಿಯೆ ಮಣ್ಣು
ಒಳಗೆ ಹೊರಗೆ ಏಕವಾಗಿ.

ಕಾಂತೆ ಕೇಳೆ ಕರುಣದಿಂದ
ಬಂತು ಕಾಣೆ ಹುಬ್ಬು ಮಳೆಯು
ಎಂತೊ ಶಿಶುನಾಳಧೀಶನ ತಾನು
ನಿಂತು ಪೊರೆವನು ಎಂದು ನಂಬಿದೆ

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......