Thursday, May 12, 2011

ಅಳಬೇಡ ತಂಗಿ ಅಳಬೇಡ ನಿನ್ನ

ಅಳಬೇಡ ತಂಗಿ ಅಳಬೇಡ ನಿನ್ನ
ಕಳುಹಬಂದವರಿಲ್ಲಿ ಉಳುಹಿಕೊಂಬುವರಿಲ್ಲ ||ಪಲ್ಲ||

ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ
ದುಡಕೀಲೆ ಮುಂದಕ ನೂಕಿದರವ್ವಾ
ಮಿಡಕ್ಯಾಡಿ ಮದಿವ್ಯಾದಿ ಮೋಜು ಕಾಣವ್ವ ಮುಂದ
ಹುಡುಕ್ಯಾಡಿ ಮಾಯದ ಮರವೇರಿದೆವ್ವಾ ||೧||

ಮಿಂಡೇರ ಬಳಗವು ಬೆನ್ನ್ಹತ್ತಿ ಬಂದು ನಿನ್ನ
ರಂಡೇರೈವರು ಕೂಡಿ ನಗುತಲಿ ನಿಂದು
ಕಂಡವರ ಕಾಲ್ಬಿದ್ದು ಕೈಮುಗಿದು ನಿಂತರ
ಗಂಡನ ಮನಿ ನಿನಗ ಬಿಡದವ್ವ ತಂಗಿ ||೨||

ರಂಗೀಲಿ ಉಟ್ಟೀದಿ ರೇಶ್ಮಿದಡಿಶೀರಿ ಮತ್ತs
ಹಂಗನೂಲಿನ ಪರವಿ ಮರತೆವ್ವ ನಾರಿ
ಮಂಗಳ ಮೂರುತಿ ಶಿಶುನಾಳಧೀಶನ
ಅಂಗಳಕ ನೀ ಹೊರತಾದೆವ್ವ ಗೌರಿ ||೩||

No comments:

Post a Comment

ಕರಗಿತು ಕಂಪಿನ ಕರ್ಪೂರ... - ಮಹೇಶ ಭಟ್ಟ ಆರ್. ಹಾರ್ಯಾಡಿ

ಮೊನ್ನೆಯ ದಿನ (೧೦.೦೪.೨೬) ಬೆಳಗ್ಗೆ ನಾನು ಕಾಲೇಜಿಗೆ ಸೇರಿಕೊಂಡ ಸ್ವಲ್ಪ ಹೊತ್ತಿನಲ್ಲೇ ನನ್ನ ಶ್ರೀಮತಿ ಕರೆಮಾಡಿ 'ನಾಡೋಜ ಎಸ್. ಆರ್. ರಾಮಸ್ವಾಮಿ ಅವರು ಭೌತಿಕವಾಗಿ ...