Thursday, May 12, 2011

ಅಳಬೇಡ ತಂಗಿ ಅಳಬೇಡ ನಿನ್ನ

ಅಳಬೇಡ ತಂಗಿ ಅಳಬೇಡ ನಿನ್ನ
ಕಳುಹಬಂದವರಿಲ್ಲಿ ಉಳುಹಿಕೊಂಬುವರಿಲ್ಲ ||ಪಲ್ಲ||

ಖಡೀಕೀಲೆ ಉಡಿಯಕ್ಕಿ ಹಾಕಿದರವ್ವಾ ಒಳ್ಳೆ
ದುಡಕೀಲೆ ಮುಂದಕ ನೂಕಿದರವ್ವಾ
ಮಿಡಕ್ಯಾಡಿ ಮದಿವ್ಯಾದಿ ಮೋಜು ಕಾಣವ್ವ ಮುಂದ
ಹುಡುಕ್ಯಾಡಿ ಮಾಯದ ಮರವೇರಿದೆವ್ವಾ ||೧||

ಮಿಂಡೇರ ಬಳಗವು ಬೆನ್ನ್ಹತ್ತಿ ಬಂದು ನಿನ್ನ
ರಂಡೇರೈವರು ಕೂಡಿ ನಗುತಲಿ ನಿಂದು
ಕಂಡವರ ಕಾಲ್ಬಿದ್ದು ಕೈಮುಗಿದು ನಿಂತರ
ಗಂಡನ ಮನಿ ನಿನಗ ಬಿಡದವ್ವ ತಂಗಿ ||೨||

ರಂಗೀಲಿ ಉಟ್ಟೀದಿ ರೇಶ್ಮಿದಡಿಶೀರಿ ಮತ್ತs
ಹಂಗನೂಲಿನ ಪರವಿ ಮರತೆವ್ವ ನಾರಿ
ಮಂಗಳ ಮೂರುತಿ ಶಿಶುನಾಳಧೀಶನ
ಅಂಗಳಕ ನೀ ಹೊರತಾದೆವ್ವ ಗೌರಿ ||೩||

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......