Friday, May 13, 2011

ಬಿದ್ದಿಯಬ್ಬೇ ಮುದುಕಿ

ಬಿದ್ದಿಯಬ್ಬೇ ಮುದುಕಿ
ಬಿದ್ದೀಯಬ್ಬೇ.

ನೀ ದಿನ ಹೋದಾಕಿ
ಇರು ಭಾಳ ಜೋಕಿ
ಬಿದ್ದೀಯಬೇ ಮುದುಕಿ ಬಿದ್ದೀಯಬೇ.

ಸದ್ಯಕಿದು ಹುಲುಗೂರ ಸಂತಿ
ಗದ್ದಲದೊಳಗ್ಯಾಕ ನಿಂತಿ?
ಬಿದ್ದು ಇಲ್ಲಿ ಒದ್ದಾಡಿದರ
ಎದ್ದು ಹ್ಯಾಂಗ ಹಿಂದಕ ಬರತಿ?

ಬುದ್ದಿಗೇಡಿ ಮುದುಕಿ ನೀನು ಬಿದ್ದೀಯಬೇ.
ಬುಟ್ಟಿಯಲ್ಲಿ ಪತ್ತಲ ಇಟ್ಟಿ
ಅದನು ಉಟ್ಟ ಹೊತ್ತೊಳು ಜೋಕಿ;
ಕೆಟ್ಟಗಂಟಿ ಚೌಡೇರು ಬಂದು

ಉಟ್ಟುದನ್ನೆ ಕದ್ದಾರ ಜೋಕಿ!
ಬುದ್ಧಿಗೇಡಿ ಮುದುಕಿ ನೀನು ಬಿದ್ದೀಯಬೇ.
ಶಿಶುನಾಳಾಧೀಶನ ಮುಂದೆ
ಕೊಸರಿ ಕೊಸರಿ ಹೋಗಬ್ಯಾಡ,

ಹಸನವಿಲ್ಲ ಹರಯ ಸಂದ
ಪಿಸುರು ಪಿಚ್ಚುಗಣ್ಣಿನ ಮುದುಕಿ
ಬುದ್ದಿಗೇಡಿ ಮುದುಕಿ ನೀನು ಬಿದ್ದೀಯಬೇ.

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......