Monday, May 16, 2011

ಅತ್ತ ಇತ್ತ ಹರಿದಾಡುವ ಮನಸಿಗೆ.


ಅತ್ತ ಇತ್ತ ಹರಿದಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.
ಕಡುವಿಷಯದಿ ಸಂಸಾರಕೆ ಮರುಗುತ
ಪೊಡವಿ ತಳದಿ ಮಿಡಿಕ್ಯಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.


ಸಿರಿ ಸಂಪದ ಸೌಭಾಗ್ಯ ತನಗೆ ಬಲು
ಹಿರಿದಾಗಲಿಬೇಕೆಂಬುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.



ವಸುಧೆಯೊಳಗೆ ಶಿಶುನಾಳಾಧೀಶನ
ಹೆಸರು ಮರೆತು ಕೊಸರ್‍ಯಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.




.

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......