Monday, May 16, 2011

ಅತ್ತ ಇತ್ತ ಹರಿದಾಡುವ ಮನಸಿಗೆ.


ಅತ್ತ ಇತ್ತ ಹರಿದಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.
ಕಡುವಿಷಯದಿ ಸಂಸಾರಕೆ ಮರುಗುತ
ಪೊಡವಿ ತಳದಿ ಮಿಡಿಕ್ಯಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.


ಸಿರಿ ಸಂಪದ ಸೌಭಾಗ್ಯ ತನಗೆ ಬಲು
ಹಿರಿದಾಗಲಿಬೇಕೆಂಬುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.



ವಸುಧೆಯೊಳಗೆ ಶಿಶುನಾಳಾಧೀಶನ
ಹೆಸರು ಮರೆತು ಕೊಸರ್‍ಯಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.




.

No comments:

Post a Comment

ಒಂದು ಸಂಕೀರ್ಣ ವಿಷಯದ ಬಗ್ಗೆ ಸರಳವಾಗಿ ತಿಳಿದುಕೊಳ್ಳೋಣ ಬನ್ನಿ! -ರೋಹಿತ್ ಚಕ್ರತೀರ್ಥ

ಇಂದು ಪ್ರಧಾನಿ ಮೋದಿಯವರು ಮಾನ್ಯ ಜನರಿಗೆ ಸಾಮಾನ್ಯವಾಗಿ ಅರ್ಥವಾಗದ ಅಥವಾ ತಲೆಯ ಮೇಲಿಂದ ಹಾರಿಹೋಗುವ ಒಂದು ವಿಷಯದ ಬಗ್ಗೆ ಟ್ವೀಟ್ ಮಾಡಿದ್ದಾರೆ. ಅದರಲ್ಲಿ ಮೂರು ಸಂಗತಿಗಳು...