Monday, May 16, 2011

ಅತ್ತ ಇತ್ತ ಹರಿದಾಡುವ ಮನಸಿಗೆ.


ಅತ್ತ ಇತ್ತ ಹರಿದಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.
ಕಡುವಿಷಯದಿ ಸಂಸಾರಕೆ ಮರುಗುತ
ಪೊಡವಿ ತಳದಿ ಮಿಡಿಕ್ಯಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.


ಸಿರಿ ಸಂಪದ ಸೌಭಾಗ್ಯ ತನಗೆ ಬಲು
ಹಿರಿದಾಗಲಿಬೇಕೆಂಬುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.



ವಸುಧೆಯೊಳಗೆ ಶಿಶುನಾಳಾಧೀಶನ
ಹೆಸರು ಮರೆತು ಕೊಸರ್‍ಯಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.




.

No comments:

Post a Comment

ಸೋದರಿ ನಿವೇದಿತಾ

 ಪಾಶ್ಚಾತ್ಯರಿಗೆ ಶಂಕರಾಚಾರ್ಯರಂಥಹ ವ್ಯಕ್ತಿಯೊಬ್ಬರನ್ನು ಊಹಿಸಿಕೊಳ್ಳಲು ಕೂಡ ಕಷ್ಟ. ನಾವು, ಅಂದರೆ ಪಾಶ್ಚಾತ್ಯರು ಅಸ್ಸಿಸಿಯ ಫ್ರಾನ್ಸಿಸ್ಸನ ದೈವಭಕ್ತಿಯನ್ನು ಆಶ್ಚರ್ಯ ಸ...