Monday, May 16, 2011

ಅತ್ತ ಇತ್ತ ಹರಿದಾಡುವ ಮನಸಿಗೆ.


ಅತ್ತ ಇತ್ತ ಹರಿದಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.
ಕಡುವಿಷಯದಿ ಸಂಸಾರಕೆ ಮರುಗುತ
ಪೊಡವಿ ತಳದಿ ಮಿಡಿಕ್ಯಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.


ಸಿರಿ ಸಂಪದ ಸೌಭಾಗ್ಯ ತನಗೆ ಬಲು
ಹಿರಿದಾಗಲಿಬೇಕೆಂಬುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.



ವಸುಧೆಯೊಳಗೆ ಶಿಶುನಾಳಾಧೀಶನ
ಹೆಸರು ಮರೆತು ಕೊಸರ್‍ಯಾಡುವ ಮನಸಿಗೆ
ಮಚ್ಚಿಲ್ಹೊಡೆದು ನಿಲ್ಲಿಸು ಜಾಣ.




.

No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...