Friday, May 20, 2011

ಮೋಹದ ಹೆಂಡತಿ ಸತ್ತ ಬಳಿಕ

ಮೋಹದ ಹೆಂಡತಿ ಸತ್ತ ಬಳಿಕ
ಮಾವನ ಮನೆಯ ಹಂಗಿನ್ನ್ಯಾಕೋ ||ಪಲ್ಲ||
ಸಾವು ನೋವಿಗೆ ತರುವ ಬೀಗನ
ಮಾತಿನ ಹಂಗೊಂದೆನಗ್ಯಾಕೋ ||ಅನುಪಲ್ಲ||

ಖಂಡವನದಿ ಸೋಂಕಿ ತನ್ನ ಮೈಯೊಳು ತಾಕಿ
ಬಂಡೆದ್ದು ಹೋಗುವದು ಭಯವ್ಯಾಕೋ
ಮಂಡಲನಾಡಿಗೆ ಪಿಂಡದ ಗೂಡಿಗೆ
ಚಂಡಿತನದಿ ಚರಿಸ್ಯಾಡುವದ್ಯಾಕೋ ||೧||

ತಂದೆ ಗುರುಗೋವಿಂದನ ಸೇವಕ
ಕುಂದಗೋಳಕೆ ಬಂದು ನಿಂತಾನ್ಯಾಕೋ
ಬಂಧುರ ಶಿಶುನಾಳಧೀಶನ ದಯದಿಂದ
ಇಂದಿಗೆ ವಿಷಯದ ವ್ಯಸನಗಳ್ಯಾಕೋ ||೨||

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......