Saturday, May 21, 2011

ಒಳ್ಳೇ ನಾರಿ ಕಂಡೆ

.ಒಳ್ಳೇ ನಾರಿ ಕಂಡೆ
ಒಳ್ಳೇ ನಾರಿ ಕಂಡೆ - ಈಗಲೆ
ಒಳ್ಳೇ ನಾರಿ ಕಂಡೆ,
ಇಳೆಯ ತಳದಿ ತಪದೊಳು ನಿಂತು
ಕಳೆಯ ಋಷಿಗಳ ಮರಳು ಮಾಡುವ



ಕೈಯು ಕಾಲು - ಉಸುರು
ಮೈಯಿ ಮೊದಲೆ ಇಲ್ಲ;
ಚೆಲ್ಲುತ ಪರಮಾನಂದ ಎದಿಯೊಳು
ಎಲ್ಲವ ಬಿಡಿಸಿ ಕರುಣದಿ ಕಾಯುವ

ಮುಟ್ಟಲು ಕೊಲ್ಲುವಳೋ - ಕಾಮನ
ಕಟ್ಟಿ ಆಳುತಿಹಳೊ ;
ಬಟ್ಟಕುಂಚಕ, ಬರೆದಿಟ್ಟ ಕುಪ್ಪಸಕ
ನಟ್ಟು ಮನಸು ನಡೆಗೆಟ್ಟು ನಿಂತಿತೋ.

ಮೀಸಲು ನಗೆಯುವಳು - ಶಿಶುನಾಳಾ
ಧೀಶಗೆ ಸೋತವಳು ;
ವಾಸಿಸಿ ಗುಡಿಪುರದಿ - ಗೋವಿಂದನ
ದಾಸರನ್ನು ತಾ ಸೆಳೆಯುತಲಿಹಳು.

No comments:

Post a Comment

ಹೀಗೂ ಇದ್ದರು ನಮ್ಮ ಹೆಮ್ಮೆಯ ಕನ್ನಡ ಸಾಹಿತಿಗಳು - ಸಂಗ್ರಹ

ಗಳಗನಾಥರು ಗಳಗನಾಥರು ಕನ್ನಡದ ಪುಸ್ತಕಗಳನ್ನು ತಲೆಯಲ್ಲಿ ಹೊತ್ತುಕೊಂಡು ಮಾರಾಟ ಮಾಡುತ್ತಿದ್ದ ಪುಣ್ಯಾತ್ಮರು ಇವರು.  ನಿಮ್ಮ ಮನೆಯಲ್ಲಿ ಲಕ್ಷ್ಮಿ ಇದ್ದರೆ ಸಾಲದು, ನಾನು ಸರ...