Monday, May 23, 2011

ಎಂಥಿಂಥಾದೆಲ್ಲಾನು ಬರಲಿ

ಎಂಥಿಂಥಾದೆಲ್ಲಾನು ಬರಲಿ
ಚಿಂತೆಯಂಬೋದು ನಿಜವಾಗಿರಲಿ ||ಪಲ್ಲ||
ಪರಾತ್ಪರನಾದ ಗುರುವಿನ
ಅಂತಃಕರಣ ಒಂದು ಬಿಡದಿರಲಿ ||ಅನುಪಲ್ಲ||

ಬಡತನೆಂಬುದು ಕಡೆತನಕಿರಲಿ
ವಡವಿ ವಸ್ತ ಹಾಳಾಗಿ ಹೋಗಲಿ
ನಡುವಂಥ ದಾರಿಯು ತಪ್ಪಿ
ಅಡವಿ ಸೇರಿದಂತಾಗಿ ಹೋಗಲಿ ||೧||

ಗಂಡಸ್ತಾನ ಇಲ್ಲದಂತಾಗಲಿ
ಹೆಂಡರು ಮಕ್ಕಳು ಬಿಟಗೊಟ್ಟು ಹೋಗಲಿ
ಕುಂಡಿ ಕುಂಡಿ ಸಾಲ್ದವರೊದೆಯಲಿ
ಬಂಡು ಮಾಡಿ ಜನರು ನಗಲಿ ||೨||

ನಂಬಿಗೆ ಎಳ್ಳಷ್ಟಿಲ್ಲದಂತಾಗಲಿ
ಅಂಬಲಿ ಎನಗೆ ಸಿಗದೆ ಹೋಗಲಿ
ಹುಂಬಸುಳೇಮಗನೆಂದು ಬೈಯಲಿ
ಕಂಬಾ ಮುರಕೊಂಡು ಎನ್ನ ಮ್ಯಾಲೆ ಬೀಳಲಿ ||೩||

ವ್ಯಾಪಾರುದ್ಯೋಗ ಇಲ್ಲದಾಂಗಾಗಲಿ
ಬುದ್ಧಿಯೆಂಬುದು ಮಸಣಿಸಿ ಹೋಗಲಿ
ಮದ್ದು ಹಾಕಿ ಎನ್ನನು ಕೊಲ್ಲಲಿ
ಹದ್ದು ಕಾಗಿ ಹರಕೊಂಡು ತಿನ್ನಲಿ ||೪||

ಭಾಷೆ ಪಂಥ ನಡಿದ್ಹಾಂಗಾಗಲಿ
ಹಾಸ್ಯ ಮಾಡಿ ಜನರೆಲ್ಲರು ನಗಲಿ
ಈ ಶಿಶುನಾಳಧೀಶ ಸದ್ಗುರುವಿನ
ಲೇಸಾದ ದಯವೊಂದು ಕಡೆತನಕಿರಲಿ ||೫||


No comments:

Post a Comment

"RSS ಮತ್ತು DSS - ಒಂದು ತೌಲನಿಕ ಅಧ್ಯಯನ"- ಪ್ರವೀಣಕುಮಾರ M

RSS (ರಾಷ್ಟ್ರೀಯ ಸ್ವಯಂಸೇವಕ ಸಂಘ) ತನ್ನ 100 ನೇ ವರ್ಷದ ಸಂಭ್ರಮವನ್ನು ದೇಶದಾದ್ಯಂತ ಆಚರಿಸುತ್ತಿದೆ. ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಮತ್ತು ಆ ಪಕ್ಷವನ್ನು  ಬೆಂಬಲಿಸುವ ...