Tuesday, May 24, 2011

ಹುಟ್ಟಿದ ಹೊಲಿಮನಿ

ಹುಟ್ಟಿದ ಹೊಲಿಮನಿ
ಬಿಟ್ಟರೆ ಖಾಲಿಮನಿ
ಎಷ್ಟಿದ್ದರೇನಿದು ಗಳಿಗಿ ಮನಿ.


ವಸ್ತಿ ಇರುವ ಮನಿ
ಗಸ್ತಿ ತಿರುಗೋ ಮನಿ
ಶಿಸ್ತಿಲೆ ಕಾಣುವ ಶಿವನ ಮನಿ.

ಚಿಂತೆ ಕಾಂತೆಯ ಮನಿ
ಸಂತಿ ಸವತಿಯ ಮನಿ
ಅಂತು ಬಲ್ಲವರಿಗೆ ಆಡೂ ಮನಿ.


ಒಂಬತ್ತು ದ್ವಾರ ದಾಟಿ
ಗಂಟಿಕ್ಕಿ ಹೋಗುವಾಗ
ಗಂಟೆ ಬಾರಿಸಿದಂತೆ ಗಾಳಿಮನಿ.


ವಸುಧೆಯೊಳಗೆ ನಮ್ಮ
ಶಿಶುನಾಳಧೀಶನ
ಹಸನಾದ ಪದಗಳ ಹಾಡೂ ಮನಿ.

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......