Thursday, May 26, 2011

ಬಿಡತೇನಿ ದೇಹ ಬಿಡತೇನಿ

ಬಿಡತೇನಿ ದೇಹ ಬಿಡತೇನಿ ||ಪಲ್ಲ||

ಬಿಡತೇನಿ ದೇಹವ ಕೊಡತೇನಿ ಭೂಮಿಗೆ
ಇಡತೇನಿ ಮಹಿಮಾದ ನಡತೆ ಹಿಡಿದು ದೇಹಾ ||೧||

ಪಾವಕಾಗುಹುತಿ ಮಾಡಿ ಜೀವನದಸು
ನಾ ಬೇರೆ ಬೈಲು ಬ್ರಹ್ಮದೊಳಾಡುತಲಿ ದೇಹಾ ||೨||

ಅವನಿಯೊಳು ಶಿಶುನಾಳಧೀಶನೆ ಗತಿಯೆಂದು
ಜವನಬಾಧೆಗೆದ್ದು ಶಿವಲೋಕದೊಳು ದೇಹಾ ಬಿಡತೇನಿ ||೩||

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......