Friday, May 27, 2011

ದುಡ್ಡು ಕೆಟ್ಟದ್ದು ನೋಡಣ್ಣ - ದುಗ್ಗಾಣಿಗೆ

ದುಡ್ಡು ಕೆಟ್ಟದ್ದು ನೋಡಣ್ಣ - ದುಗ್ಗಾಣಿಗೆ
ದಡ್ಡನಾಗಬೇಡೋ, ತಿಂದೀ ನೀ ಮಣ್ಣ !
ದುಡ್ಡು ಕೆಟ್ಟದ್ದೊ ಹೆಡ್ಡ ಮೂಢಾತ್ಮ
ದೊಡ್ಡ ದೊಡ್ಡವರನ್ನೆ ಹೆಗ್ಗಾಲು ಇಡಿಸಿತು.

ದುಡ್ಡು ಕೆಟ್ಟದ್ದು ನೋಡಣ್ಣ
ಹೆಣ್ಣಿನ ಪೂಜೆಗೆ ಇಳಿಸಿ - ಮಣ್ಣಿನ
ಸಂತೇಲಿ ಇಲ್ಲದ ಮರ್ಯಾದೆ ಕೊಡಿಸಿ
ಮಿಣ್ಣನೆ ತಿಂದೀತು ಒಳಗ - ಮೆಲ್ಲನೆ

ಥಣ್ಣಗ ಮಾಡೀತು ಬೆಂಕಿಯ ಕಿಡಿ.
ರೊಕ್ಕ ಮುಕ್ಕಿಸೀತು ಮಣ್ಣು - ಅದ
ತಕ್ಕಂತೆ ಬಳಸಲು ತೆರೆಸೀತು ಕಣ್ಣು
ಮುಕ್ಕುವ ಚಪಲ ಏಕಿನ್ನು - ಮುಕ್ಕಿ

ಬಿಕ್ಕಳಿಸಲು ಕುಡಿಸೀತು ನೀರನ್ನು.
ಆಸೆ ಬಿದ್ದು ಮನದ ಮಾರಿ
ಹೊಂಟ್ಯಳೊ ಹುಡುಕುತ್ತ ನೂರೆಂಟು ಕೇರಿ
ಕಾಸು ಕಾಸನ್ನೂ ಹೆಕ್ಕಿ - ಮೂಳಿ
ಶಿಶುನಾಳಾಧಿಶನ ಮರೆತಾಳು ಸೊಕ್ಕಿ.

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......