Tuesday, May 17, 2011

ಸ್ನೇಹ ಮಾಡಬೇಕಿಂತವಳ!

ಸ್ನೇಹ ಮಾಡಬೇಕಿಂತವಳ!
ಸ್ನೇಹ ಮಾಡಬೇಕಿಂಥವಳ! - ಒಳ್ಳೇ

ಮೋಹದಿಂದಲಿ ಬಂದು - ಕೂಡುವಂಥವಳ
ಚಂದ್ರಗಾವಿ ಶೀರೀನುಟ್ಟು - ದಿವ್ಯ
ಕೆಂದಾವರಿ ಮಗ್ಗಿ ಕುಪ್ಪಸ ತೊಟ್ಟು
ಬಂದಳು ಮಂದಿರ ಬಿಟ್ಟು - ನಾಲ್ಕು

ಮಂದಿಯೊಳು ಬಂದು ನಾಚುವಳೆಷ್ಟು!
ಅರಗಿಳಿ ಸಮ ಇವಳ ನುಡಿಯು - ಚೆಲ್ವ
ಸುಳಿನಾಭಿ ಕುಚಕುಂಭಗಳ ಹಂಸನಡೆಯು
ಥಳಥಳಿಸುವ ತೋಳ್ತೊಡೆಯು - ಒಳ್ಳೇ

ಬಳುಬಳುಕುವ ನಡುವು ತಳಿರಡಿಯು.
ಮುಕ್ತ ಕಾಮಿನಿ ಎನ್ನ ಕಾಡಿ - ಮೋಹ
ಮತ್ತ ಸುರತಸುಖ ಸುಡುವಂತೆ ಕೂಡಿ
ಹುಟ್ಟನ್ನೇ ಕಳೆದಳೊ ಖೋಡಿ - ದೇವ
ಶಿಶುನಾಳಾಧೀಶನ ಪಾದಕೆ ದೂಡಿ!

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......