Thursday, June 23, 2011

ಮಬ್ಬು ಕವಿದರೇನು

ಮಬ್ಬು ಕವಿದರೇನು
ನಿನ್ನ ಹಬ್ಬಿದಿರುಳ ದಾರಿಗೆ
ನಡೆ ಮುಂದಕೆ ಧೈರ್ಯದಿಂದ
ಅರುಣೋದಯ ತೀರಕೆ

ಹಳೆ ನೆನಪುಗಳುದುರಲಿ ಬಿಡು
ಬೀಸುವ ಚಳಿ ಗಾಳಿಗೆ
ತರಗೆಲೆಗಳ ಚಿತೆಯುರಿಯಲಿ
ಚೈತ್ರೋದಯ ಜ್ವಾಲೆಗೆ

ಹೊಸ ಭರವಸೆ ಚಿಗುರುತಲಿವೆ
ಎಲೆ ಉದುರಿದ ಕೊಂಬೆಗೆ
ಅರಳಿ ನಗುವ ಹೂಗಳಲ್ಲಿ
ಪುಟಿಯುತಲಿವೆ ನಂಬಿಕೆ

ಹಗಲಿರುಳಿನ ಕುದುರೆಗಳನು
ಹೂಡಿದ ರಥ ಸಾಗಿದೆ
ಯುಗ ಯುಗಗಳ ಹಾದಿಯಲ್ಲಿ
ಋತು ಚಕ್ರಗಳುರುಳಿವೆ

No comments:

Post a Comment

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......