Thursday, June 2, 2011

ಇಷ್ಟು ಕಾಲ....

ಇಷ್ಟು ಕಾಲ ಒಟ್ಟಿಗಿದ್ದು..ಎಷ್ಟು ಬೆರೆತರೂ.....
ಅರಿತೆವೇನು ನಾವು ನಮ್ಮ ಅಂತರಾಳವ....?

ಸದಾ ಕಾಲ ತಬ್ಬುವಂತೆ ಮೇಲೆ ಬಾಗಿಯೂ.....
ಮಣ್ಣ ಮುದ್ದು ದೊರಕಿತೇನು.. ನೀಲಿ ಬಾನಿಗೆ...?

ಕಡಲ ಮೇಲೆ ಸಾವಿರಾರು ಮೈಲಿ ಸಾಗಿಯೂ.....
ನೀರಿನಾಳ ತಿಳಿಯಿತೇನು ಹಾಯಿ ದೋಣಿಗೆ....?

ಸಾವಿರಾರು ಮುಖದ ಚೆಲುವ ಹಿಡಿದು ತೋರಿಯೂ....
ಒಂದಾದರು ಉಳಿಯಿತೇ..ಕನ್ನಡಿಯ ಪಾಲಿಗೆ....???

1 comment:

ಡಾ ಎಚ್ ಎಸ್ ವೆಂಕಟೇಶ ಮೂರ್ತಿ (೨೩.೦೬.೧೯೪೪-೩೦.೦೫.೨೦೨೫) - ಒಂದು ನೆನಪು - ಸಿ ಬಿ ಶೈಲಾ ಜಯಕುಮಾರ್. ಚಿತ್ರದುರ್ಗ.

  "ಪ್ರೀತಿ ಕೊಟ್ಟ ರಾಧೆಗೆ...ಮಾತು ಕೊಟ್ಟ ಮಾಧವ..." "ಅಮ್ಮ ನಾನು ದೇವರಾಣೆ ಬೆಣ್ಣೆ ಕದ್ದಿಲ್ಲಮ್ಮ..." "ಲೋಕದ ಕಣ್ಣಿಗೆ ರಾಧೆಯೂ ಕೂಡ ......